- Advertisement -
- Advertisement -
ಮಂಗಳೂರು: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ಫೋಟೊ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಅಪ್ಲೋಡ್ ಮಾಡಿದ ಪ್ರಕರಣದ ಆರೋಪಿ ಶ್ಯಾಮಸುದರ್ಶನ್ ಭಟ್ ಹೊಸಮೂಲೆಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಆರೋಪಿಯು ಜಾಮೀನು ಕೋರಿ ಅ.25ರಂದು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ರು.
ಅಕ್ಟೋಬರ್ 18 ರಂದು ಸುರತ್ಕಲ್ನಲ್ಲಿ ಟೋಲ್ ಗೇಟ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ತೆಗೆದ ತನ್ನ ಚಿತ್ರಗಳು ಮತ್ತು ವಿಡಿಯೋಗಳನ್ನು ವ್ಯಕ್ತಿಯೊಬ್ಬರು ಎಡಿಟ್ ಮಾಡಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಸಭ್ಯ ರೀತಿಯಲ್ಲಿ ಪ್ರಸಾರ ಮಾಡಿದ್ದಾರೆ ಎಂದು ಕುಳಾಯಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶ್ಯಾಮ್ ಸುದರ್ಶನ್ ಭಟ್ ಹೊಸಮೂಲೆ ಮತ್ತು ಕೆ.ಆರ್. ಶೆಟ್ಟಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ರು..
- Advertisement -