Saturday, June 28, 2025
Homeಕರಾವಳಿಮಂಗಳೂರುಸುಳ್ಯ: ಬಸ್ಸಿನಿಂದ ವಿದ್ಯಾರ್ಥಿ ರಸ್ತೆ ಗೆಸೆಯಲ್ಪಟ್ಟು ವಿದ್ಯಾರ್ಥಿಗೆ ಗಾಯ ಪ್ರಕರಣ: ; ಚಾಲಕ ಹಾಗೂ ನಿರ್ವಾಹಕನಿಗೆ...

ಸುಳ್ಯ: ಬಸ್ಸಿನಿಂದ ವಿದ್ಯಾರ್ಥಿ ರಸ್ತೆ ಗೆಸೆಯಲ್ಪಟ್ಟು ವಿದ್ಯಾರ್ಥಿಗೆ ಗಾಯ ಪ್ರಕರಣ: ; ಚಾಲಕ ಹಾಗೂ ನಿರ್ವಾಹಕನಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

spot_img
- Advertisement -
- Advertisement -

ಸುಳ್ಯ: ಬಸ್ಸಿನಿಂದ ವಿದ್ಯಾರ್ಥಿ ರಸ್ತೆ ಗೆಸೆಯಲ್ಪಟ್ಟು ವಿದ್ಯಾರ್ಥಿಗೆ ಗಾಯವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಲಕ ಹಾಗೂ ನಿರ್ವಾಹಕನಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಬಸ್ ಚಾಲಕ ವಿಷ್ಣು ಕುಮಾರ್ ಮತ್ತು ನಿರ್ವಾಹಕ ವಿಜಯಕುಮಾ‌ರ್ ಶಿಕ್ಷೆಗೆ ಗುರಿಯಾಗಿರುವವರು.

2019 ಆ.24ರಂದು ಈ  ಘಟನೆ ನಡೆದಿದ್ದು, ಬಸ್ ನಿಂತಿಕಲ್ಲು ಕಡೆಯಿಂದ ಕಾಣಿಯೂರು ಕಡೆಗೆ ಸಂಚರಿಸುವ ವೇಳೆ ನಿರ್ಲಕ್ಷ್ಯತನದಿಂದ ಪ್ರಯಾಣಿಕರು ಹತ್ತುವ ಹಾಗೂ ಇಳಿಯುವ ದ್ವಾರದ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸದೆ, ಬಸ್ ಚಾಲಕ ವಿಷ್ಣು ಕುಮಾರ್ ಬಸ್ಸನ್ನು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಕಡಬ ತಾಲೂಕು ಬೆಳಂದೂರು ಎಂಬಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಮಹಮ್ಮದ್ ಅಫೀಝ್ ಎಂಬವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ಅರ್ಪಿತಾ ಅವರು ಆರೋಪಿಗಳ ಅಪರಾಧ ಸಾಬೀತಾಗಿದ್ದು ಅವರನ್ನು ದೋಷಿ ಎಂದು ಘೋಷಿಸಿ, ಒಂದನೇ ಆರೋಪಿಗೆ ಕಲಂ 279 ರಡಿಯಲ್ಲಿ 1 ತಿಂಗಳ ಸಾದಾ ಕಾರಾಗೃಹ ವಾಸ ಮತ್ತು ರೂ. 1000/- ದಂಡ, ದಂಡ ತೆರಲು ತಪ್ಪಿದಲ್ಲಿ 15 ದಿನಗಳ ಸಾದಾ ಕಾರಾಗೃಹವಾಸ, ಎರಡನೇ ಆರೋಪಿಗೆ ಕಲಂ 336 ರಡಿಯಲ್ಲಿ 1 ತಿಂಗಳ ಸಾದಾ ಕಾರಾಗೃಹವಾಸ ಮತ್ತು ರೂ. 250/- ದಂಡ, ದಂಡ ತೆರಲು ತಪ್ಪಿದಲ್ಲಿ 15 ದಿನಗಳ ಸಾದಾ ಕಾರಾಗೃಹವಾಸ ಶಿಕ್ಷೆಗೆ ಆದೇಶ ನೀಡಿದ್ದಾರೆ.

- Advertisement -
spot_img

Latest News

error: Content is protected !!