- Advertisement -
- Advertisement -
ಉಡುಪಿ: ಗಾಂಜಾ ಮಾರಾಟ ಪ್ರಕರಣದ ಬಂಧಿತ ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಮಹರಾಷ್ಟ್ರದ ಲಾತೂರ್ ಜಿಲ್ಲೆಯ ಅಗರ್ ವಾಹಿ ಗ್ರಾಮದ ಅವಿನಾಶ್ ದಿಗಂಬರ್ ಲೋಖಂಡೆ ಶಿಕ್ಷೆಗೊಳಗಾದ ಅಪರಾಧಿ.
2019 ರ ಜು.24 ರಂದು ಉಡುಪಿಯ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೇ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ನಿಂತಿದ್ದ ವೇಳೆ ಉಡುಪಿ ಸೆನ್ ಅಪರಾಧ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ರು.
- Advertisement -