- Advertisement -
- Advertisement -
ಉಳ್ಳಾಲ : ಉಳ್ಳಾಲದಲ್ಲಿ ಯುವಕನ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಹಲ್ಲೆಯ ಸುಳ್ಳು ಕಥೆ ಕಟ್ಟಿದವನ ವಿರುದ್ಧ ಕ್ರಮ ಶ್ಲಾಘನೀಯ. ಆದರೆ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ. ಇದರ ಹಿಂದಿರುವ ಕಾಣದ ಕೈಗಳನ್ನು ಕೂಡಾ ಪತ್ತೆ ಹಚ್ಚಿ ಕಾನೂನಿನ ಮುಂದೆ ತರಬೇಕೆಂದು ಖಾದರ್ ಆಗ್ರಹಿಸಿದ್ದಾರೆ.
- Advertisement -