Monday, May 6, 2024
Homeಕರಾವಳಿಬೋಟುಗಳ ಮೇಲೆ ತಮಿಳುನಾಡು ಮೀನುಗಾರರಿಂದ ಕಲ್ಲು ತೂರಾಟ ಪ್ರಕರಣ; ಮಂಗಳೂರು ಮೀನುಗಾರರಿಂದ ದೂರು

ಬೋಟುಗಳ ಮೇಲೆ ತಮಿಳುನಾಡು ಮೀನುಗಾರರಿಂದ ಕಲ್ಲು ತೂರಾಟ ಪ್ರಕರಣ; ಮಂಗಳೂರು ಮೀನುಗಾರರಿಂದ ದೂರು

spot_img
- Advertisement -
- Advertisement -

ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರರು ದೂರು ನೀಡಿದ್ದಾರೆ.

ಮಂಗಳೂರಿನ ಬೋಟ್​ಗಳ ಮೇಲೆ ತಮಿಳುನಾಡಿನ ಕನ್ಯಾಕುಮಾರಿ ಬಳಿ ಕಲ್ಲು ತೂರಾಟ ನಡೆಸಲಾಗಿತ್ತು.ಕಲ್ಲು ತೂರಾಟದ ಪರಿಣಾಮ ಮಂಗಳೂರಿನ ಬೋಟ್​ಗಳಲ್ಲಿದ್ದ ಏಳೆಂಟು ಮಂದಿ ಮೀನುಗಾರರು ಗಾಯಗೊಂಡಿದ್ದರು.

ಫೆ.8ರಂದು. 7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದರು.ಮಂಗಳೂರಿನಿಂದ ತೆರಳಿದ್ದ ಬೋಟ್​ಗಳನ್ನು ಸಮುದ್ರದ ಮಧ್ಯೆ ತಮಿಳು ಮಾತನಾಡುತ್ತಿದ್ದ ಮೀನುಗಾರರಿದ್ದ ಹತ್ತಾರು ಬೋಟ್​ಗಳು ಸುತ್ತುವರಿದಿದ್ದವು. ಈ ವೇಳೆ ಆ ಬೋಟ್​ಗಳಲ್ಲಿ ಇದ್ದ ಕೆಲವರು ಮಂಗಳೂರಿನ ಬೋಟ್​ಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಕೃತ್ಯದ ಬಗ್ಗೆ ಮೀನುಗಾರರು ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!