- Advertisement -
- Advertisement -
ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ.
ಕಳಸ ತಾಲೂಕಿನ ಹಿಂದೂಪರ ಸಂಘಟನೆ ಮುಖಂಡ ಆರೋಪಿ ನಿತೇಶ್ ಹಾಗೂ ಆತನ ಪ್ರೇಯಸಿ ಇಬ್ಬರು ಪ್ರೀತಿಸುತ್ತಿದ್ದು, ಇಬ್ಬರ ನಡುವೆ ಜಗಳವಾಗಿ ಮನನೊಂದು ಅಪ್ರಾಪ್ತ ಯುವತಿ ಜನವರಿ 15 ರಂದು ಆತ್ಮಹತ್ಯೆಗೆ ಶರಣಾಗಿದ್ದಳು. ನಂತರ ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಈ ಕುರಿತು ಯುವತಿ ಬರೆದಿಟ್ಟಿದ್ದ ಡೆತ್ ನೋಟ್ ಆಧಾರದ ಮೇಲೆ ಆರೋಪಿ ವಿರುದ್ದ ಪೋಕ್ಸೊ ಕೇಸ್ ದಾಖಲಿಸಿ ಇದೀಗ ಆರೋಪಿಯನ್ನ ಬಂಧಿಸಿದ್ದಾರೆ.
- Advertisement -