- Advertisement -
- Advertisement -
ಮಂಗಳೂರು: ಕೂಳೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಸಾವಿಗೆ ಕಾರಣನಾದ ಆರೋಪಿ ಬಸ್ ಚಾಲಕನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.
ಬಸ್ ಚಾಲಕ ಸೀತಾರಾಮ ಎಂಬುವವರೇ ಶಿಕ್ಷೆಗೊಳಗಾದ ಆರೋಪಿ. 2ನೇ ಜೆಎಂಎಫ್ಸಿ ನ್ಯಾಯಾಲಯ 6 ತಿಂಗಳ ಸಾದಾ ಶಿಕ್ಷೆ ಹಾಗೂ 6 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
2020ರ ಡಿ.4ರಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು ಸೇತುವೆ ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ರು. ಬೈಕ್ ಗೆ ಹಿಂಬದಿಯಿಂದ ಬರ್ತಿದ್ದ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ರು. ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
- Advertisement -