- Advertisement -
- Advertisement -
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಉದ್ಯಮಿಯೋರ್ವರಿಂದ 25 ಲ.ರೂ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದು, ಇದೀಗ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಲೋಕಾಯುಕ್ತ ಪೊಲೀಸರು ಟಿಡಿಆರ್ಗೆ ಸಂಬಂಧಿಸಿದಂತೆ ಮಾ.23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿದ್ದರು. ದಲ್ಲಾಳಿ ಮುಹಮ್ಮದ್ ಸಲೀಂಗೂ ನ್ಯಾಯಾಂಗ 14 ದಿನಗಳ ಬಂಧನ ವಿಧಿಸಲಾಗಿದೆ.
- Advertisement -