ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಇಲ್ಲಿನ ಬೆಳ್ತಂಗಡಿಯ ಸಂತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಾರ್ಪಣೆ ಮಾಡಲಾಯಿತು.
ಸಂಸ್ಥೆಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್,(ರಿ)ಧರ್ಮಸ್ಥಳ, ಕಸ್ತೂರ್ಬಾ ಸಂಜೀವಿನಿ ಸ್ವ-ಸಹಾಯ ಸಂಘ ಬೆಳಾಲು,ವೀರಕೇಸರಿ ಕನ್ಯಾಡಿ ಧರ್ಮಸ್ಥಳ ಹಾಗು ವೈಯಕ್ತಿಕ ನೆಲೆಯಲ್ಲಿ ವಿಶೇಷ ಪ್ರಬಂಧಕ್ಕಾಗಿ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ಡಾ.ಭಾಸ್ಕರ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಪುರಸ್ಕೃತರಾದ ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಡಾ.ವೇಣುಗೋಪಾಲ ಶರ್ಮ, ಜಿನ್ನಪ್ಪ ಗೌಡ ಬೆಳಾಲು,ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಯಾಕೂಬ್ ಕೊಯ್ಯೂರು, ಕಂಬಳ ಓಟಗಾರರಾದ ಸುರೇಶ್ ಹಕ್ಕೇರಿ, ಇವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಅಧ್ಯಕ್ಷತೆ ವಹಿಸಿದ್ದು, SDM ಕಾಲೇಜು ಪ್ರಾಂಶುಪಾಲ ಡಾ ಸತೀಶ್ಚಂದ್ರ ಎಸ್ ಮುಖ್ಯಅತಿಥಿಯಾಗಿ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಪತ್ರಕರ್ತ ಸಂಘದ ಉಪಾಧ್ಯಕ್ಷ ದೀಪಕ್ ಅಠಾವಳೆ, ಕಾರ್ಯದರ್ಶಿ ಮನೋಹರ್ ಬಳಂಜ, ಹಾಗೂ ಸದಸ್ಯರು ಉಪಸ್ಥಿತರಿದ್ದರು.