Saturday, June 28, 2025
Homeತಾಜಾ ಸುದ್ದಿಮಂಗಳೂರು: ಅಂಗಡಿಯಲ್ಲಿ ಚಾರ್ಜ್‌ಗಿಟ್ಟ ಎಲೆಕ್ಟ್ರಿಕ್‌ ಸ್ಕೂಟರ್‌ ಬೆಂಕಿಗಾಹುತಿ

ಮಂಗಳೂರು: ಅಂಗಡಿಯಲ್ಲಿ ಚಾರ್ಜ್‌ಗಿಟ್ಟ ಎಲೆಕ್ಟ್ರಿಕ್‌ ಸ್ಕೂಟರ್‌ ಬೆಂಕಿಗಾಹುತಿ

spot_img
- Advertisement -
- Advertisement -

ಮಂಗಳೂರು: ಅಂಗಡಿಯಲ್ಲಿ ಚಾರ್ಜ್‌ಗಿಟ್ಟ ಎಲೆಕ್ಟ್ರಿಕ್‌ ಸ್ಕೂಟರ್‌ ಬೆಂಕಿಗೆ ಆಹುತಿಯಾದ ಘಟನೆ ನಗರದ ಬೋಳೂರಿನ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ.

ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಹಾಲಿನ ವ್ಯಾಪಾರಿ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ ಹಾಲಿನ ಬೂತ್ ಬಳಿ ಶನಿವಾರ ಬೆಳಗ್ಗೆ 10.30ಕ್ಕೆ ಚಾರ್ಜ್‌ಗೆ ಇಡಲಾಗಿತ್ತು ಎನ್ನಲಾಗಿದೆ. ಮಧ್ಯಾಹ್ನದ ವೇಳೆ ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡಿದೆ. ಇದರಿಂದ ಸುಮಾರು 4 ಲ.ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭೇಟಿ ನೀಡಿ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

- Advertisement -
spot_img

Latest News

error: Content is protected !!