- Advertisement -
- Advertisement -
ಆನೇಕಲ್: ಯುಕೆಜಿ ಓದುತ್ತಿದ್ದ ಮಗುವನ್ನು ಅನುತ್ತೀರ್ಣಗೊಳಿಸಿದ ಘಟನೆಯೊಂದು ಆನೇಕಲ್ ತಾಲೂಕಿನ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಶಾಲೆಯಲ್ಲಿ ನಡೆದಿದೆ. ಈ ಕುರಿತು ಭಾರೀ ಚರ್ಚೆಯಾಗುತ್ತಿದ್ದು,ಶಾಲಾ ಆಡಳಿತ ಮಂಡಳಿ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿದೆ.
ಇನ್ನು ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ ಮಾಜಿ ಸಚಿವ ಸುರೇಶ್ ಕುಮಾರ್, UKG ತರಗತಿಯಲ್ಲಿ ಓದುತ್ತಿರುವ ಈ ಎಳೆಯ ಮಗುವನ್ನು ಫೇಲ್ ಮಾಡಿರುವ ಶಿಕ್ಷಣ ಸಂಸ್ಥೆಗೆ ತಲೆಯೂ ಇಲ್ಲ, ಹೃದಯ ಮೊದಲೇ ಇಲ್ಲ. ಆ ಮಗುವನ್ನು ಏನು ಮಾಡಲು ಹೊರಟಿದೆ ಈ ಮಹಾ ಶಿಕ್ಷಣ ಸಂಸ್ಥೆ! ನನ್ನ ಗಮನಕ್ಕೆ ಈ “ಮಹಾಕೃತ್ಯ” ಬಂದ ಕೂಡಲೇ ಶಿಕ್ಷಣ ಇಲಾಖೆಯ ಆ ತಾಲೂಕಿನ ಪ್ರಮುಖರಿಗೆ ತಲುಪಿಸಿ ಈ ಶಾಲೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಮನವಿ ಮಾಡಿದ್ದೇನೆ. ನಾನು ಕೂಡ ಈ ಮಹಾ ಶಾಲೆಗೆ ಸದ್ಯದಲ್ಲಿಯೇ ಒಮ್ಮೆ ಭೇಟಿ ನೀಡಿ “ಪಾವನ” ನಾಗಲು ಬಯಸಿದ್ದೇನೆ ಎಂದಿದ್ದಾರೆ.
- Advertisement -