- Advertisement -
- Advertisement -
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಪಂಚಾಯಿತಿಯ ಗ್ರಾಮ ಲೆಕ್ಕಿಗ ಸಿದ್ದಪ್ಪ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಪರಮ ಭ್ರಷ್ಟ ಎಂದೇ ಕುಖ್ಯಾತಿ ಪಡೆದಿದ್ದ ಈತ ಈ ಹಿಂದೆ ಕಡೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ನಂತರ ಶೃಂಗೇರಿಗೆ ವರ್ಗಾವಣೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ಒಂದು ವಾರದಿಂದ ಬಲೆ ಬೀಸಿದ್ದ ಎಸಿಬಿ ಅಧಿಕಾರಿಗಳು ಇಂದು ಖೆಡ್ಡಾಗೆ ಕೆಡವಿದ್ದಾರೆ.
ಹಕ್ಕುಪತ್ರ ವಿಚಾರವಾಗಿ ಶೃಂಗೇರಿಯ ನಿರೀಕ್ಷಣಾ ಮಂದಿರದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಹಿಡಿಯಲಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ತನಿಖೆ ನಡೆಸುತ್ತಿದ್ದಾರೆ.
- Advertisement -