- Advertisement -
- Advertisement -
ಉಡುಪಿ: ತೆರೆದ ಬಾವಿಗೆ ಹಸುವೊಂದು ಬಿದ್ದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ದನವನ್ನು ಮೇಲಕ್ಕೆತ್ತಿದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.
ಉದ್ಯಾವರದ ಕೆಮ್ ತೂರು ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಯಲ್ಲಿ ದನ ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ,ಬಾವಿಗೆ ಹಗ್ಗ ಇಳಿಸಿ ಮೇಲೆತ್ತಿದ್ದಾರೆ. ಉಡುಪಿ ಅಗ್ನಿಶಾಮಕ ಠಾಣಾಧಿಕಾರಿ ಸತೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
- Advertisement -