Friday, June 27, 2025
Homeಕರಾವಳಿಉಡುಪಿಉಡುಪಿ;  ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ;  ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

spot_img
- Advertisement -
- Advertisement -

ಉಡುಪಿ;  ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿದೆ.

ಮುಂಬೈಯ ಅವಿನಾಶ್ ಎಂಬವರು ತಮ್ಮ ಕುಟುಂಬದವರೊಂದಿಗೆ ನ.15ರಂದು ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಹೊರಟಿದ್ದರು. ಈ ವೇಳೆ ಒಡವೆ ಹಾಗೂ ಬಟ್ಟೆಗಳಿದ್ದ 4 ಸೂಟ್ ಕೇಸ್ಗಳನ್ನು ಬೀಗ ಹಾಕದೇ ಜೀಪ್ ಲಾಕ್ ಮಾಡಿ ಸೀಟಿನ ಕೆಳಗೆ ಇಟ್ಟಿದ್ದರು. ನ.16ರಂದು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಇಳಿದು ಕಟಪಾಡಿ ಸಮೀಪದ ಮಣಿಪುರದಲ್ಲಿರುವ ಮನೆಗೆ ಹೋಗಿದ್ದು, ಸಂಜೆ ಬ್ಯಾಗ್ ತೆರೆದು ನೋಡಿದಾಗ 2 ಬ್ಯಾಗಿಗಳಲ್ಲಿಟ್ಟಿದ್ದ 63 ಲಕ್ಷ ರೂ. ಮೌಲ್ಯದ 900 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಗೊತ್ತಾಗಿದೆ. ಪನ್ವೆಲ್ ನಿಂದ ಕಂಕಾವಲಿ ರೈಲ್ವೆ ನಿಲ್ದಾಣದ ಮಧ್ಯೆ ಯಾರೋ ಕಳ್ಳರು ಕಳವು ಮಾಡಿರಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ಆಗಿರುವುದರಿಂದ ಮುಂದೆ ಈ ಪ್ರಕರಣ ಸಂಬಂಧಪಟ್ಟ ಠಾಣೆಗೆ ವರ್ಗಾವಣೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!