- Advertisement -
- Advertisement -
ಭೋಪಾಲ್: ಇಲ್ಲಿನ ಛತರ್ಪುರ್ ಜಿಲ್ಲೆಯ ರೈತನೊಬ್ಬ ಆತ್ಮಹತ್ಯೆಗೆ ಶರನಾಗಿದ್ದಾನೆ. ಈತನು ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕಂಪನಿಯಲ್ಲಿ ಸಾಲ ಮಾಡಿದ್ದು ಅವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದೆ.
ಮುನೇಂದ್ರ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ರೈತ. ಸಾಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ರೈತ ಡೆತ್ನೋಟ್ ಬರೆದಿಟ್ಟಿದ್ದು, ಮೃತದೇಹವನ್ನು ಸರ್ಕಾರಕ್ಕೆ ಹಸ್ತಾಂತರಿಸಿ, ದೇಹದ ಪ್ರತಿಯೊಂದು ಅಂಗವನ್ನು ಮಾರಾಟ ಮಾಡಿ ಸಾಲ ತೀರಿಸುವಂತೆ ಕೋರಿದ್ದಾನೆ. ಸುಮಾರು 87,000 ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ವಿದ್ಯುತ್ ವಿತರಣ ಕಂಪನಿ ರೈತನ ಹಿಟ್ಟಿನ ಗಿರಣಿ ಮತ್ತು ಮೋಟರ್ ಸೈಕಲ್ ವಶಪಡಿಸಿಕೊಂಡಿತ್ತು ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
- Advertisement -