- Advertisement -
- Advertisement -
ಮಂಗಳೂರು: ಭಾರೀ ಬಿರುಗಾಳಿಗೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ಗಿಲ್ನೆಟ್ ಬೋಟ್ವೊಂದರ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ಪಣಂಬೂರು ಬೀಚ್ ಬಳಿ ನಡೆದಿದೆ.
ಕಸಬಾ ಬೆಂಗರೆ ನಿವಾಸಿ ಶರೀಫ್ ಎಂಬುವವರು ನಾಪತ್ತೆಯಾದ ಮೀನುಗಾರ ಎಂದು ಹೇಳಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಈ ತಂಡದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಅಝರ್ ಎಂಬವರ ಮಾಲಕತ್ವದ ಗಿಲ್ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದು, ಬೆಳಗ್ಗೆ ಸುಮಾರು 7:30 ರ ವೇಳೆಗೆ ಈ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.
- Advertisement -