- Advertisement -
- Advertisement -
ಶಿರ್ವ: ಕಾಡಿಗೆ ಬೆಂಕಿ ಬಿದ್ದು ಆರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಕಟ್ಟಿಂಗೇರಿ ನಾಲ್ಕು ಬೀದಿ ಬಳಿ ನಿನ್ನೆ ರಾತ್ರಿ ನಡೆದಿದೆ.
ನಿನ್ನೆ ಹಗಲು ಹೊತ್ತಲ್ಲೇ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ನಂದಿಸಲಾಗಿತ್ತು. ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡು ಎಲ್ಲೆಡೆ ವ್ಯಾಪಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
- Advertisement -