- Advertisement -
- Advertisement -
ಭಟ್ಕಳ: ಯುವತಿಯೋರ್ವಳು ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿ, ತಾರಾ ನಾರಾಯಣ ಮರಾಠಿ (19) ನಾಪತ್ತೆಯಾಗಿರುವ ಯುವತಿ ಎಂದು ಗುರುತಿಸಲಾಗಿದೆ.ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈಕೆ ನವೆಂಬರ್ 5 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ . ಈ ಕುರಿತು ಮಂಕಿಯ ಯತ್ನಳ್ಳಿ, ಆಡುಕಾಲಯ ಗ್ರಾಮದ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
- Advertisement -