- Advertisement -
- Advertisement -
ಪುಂಜಾಲಕಟ್ಟೆ: ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜ.10 ಬುಧವಾರದಂದು ಬೆಳಿಗ್ಗೆ ವಿದ್ಯಾರ್ಥಿನಿಯೋರ್ವಳು ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸರಕಾರಿ ಬಸ್ ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಗಂಭೀರಗೊಂಡ ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯ ಅವರ ಪುತ್ರಿ ಪಲ್ಲವಿ ಎಂದು ತಿಳಿದು ಬಂದಿದೆ. ಪಲ್ಲವಿ ವಾಮದಪದವು ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -