- Advertisement -
- Advertisement -
ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಿಸುವ ಮೂಲಕ ಯುವಕರ ತಂಡವೊಂದು ವಿನೂತನವಾಗಿ ಪ್ರತಿಭಟಿಸಿ ಗಮನ ಸೆಳೆದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ನಿನ್ನೆ(ಬುಧವಾರ) ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ಯುವಕರು ವಿನೂತನವಾಗಿ ಪ್ರತಿಭಟಿಸಿದ್ರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ , ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಜ್ವಲ್ ಜೈನ್ , ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು , ಗಣೇಶ್ ಕಣಿಯೂರು, ಸಾಮಾಜಿಕ ಕಾರ್ಯಕರ್ತರಾದ ಅಲ್ತಪ್, ಅಲ್ವಿನ್ , ನೌಷದ್ ಕೈಕಂಬ ಮತ್ತು ಇತರರು ಉಪಸ್ಥಿತರಿದ್ದರು.
- Advertisement -