- Advertisement -
- Advertisement -
ಉಡುಪಿ: ಇಲ್ಲಿನ ಯುವಕರ ತಂಡವೊಂದು ಗಾಂಜಾ ನಶೆಯಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ.
ವೀಕೆಂಡ್ ನಲ್ಲಿ ಗಾಂಜಾ ಮತ್ತಿನಲ್ಲಿದ್ದ ಯುವಕರ ತಂಡ ಕ್ಷಲ್ಲಕ ಕಾರಣಕ್ಕೆ ಆಟೋ ಚಾಲಕನ ಜೊತೆ ಗಲಾಟೆಗೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆಯಲ್ಲಿ ಆಟೋ ಚಾಲಕನನ್ನು ಅಟ್ಟಾಡಿಸಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಉಡುಪಿ ನಗರದ ಪೊಲೀಸರು ಭೇಟಿ ನೀಡಿದ್ದು, ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
- Advertisement -