- Advertisement -
- Advertisement -
ಕಲ್ಲಾಪು: ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿಕೊಂಡು ಬಂದ ಲಾರಿಯೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಹಿತ ಇಬ್ಬರು ಮೃತಪಟ್ಟು, ಮಕ್ಕಳಿಬ್ಬರು ಗಂಭೀರ ಗಾಯಗೊಂಡ ಘಟನೆ ರಾ.ಹೆ.೬೬ ರ ಕಲ್ಲಾಪು ಬಳಿ ನಡೆದಿದೆ.
ಜಪ್ಪಿನಮೊಗರು ನಿವಾಸಿ ಗಂಗಾಧರ (45), ಕೊಣಾಜೆ ಸಮೀಪದ ಪಜೀರು ನಿವಾಸಿ ನೇತ್ರಾವತಿ (48) ಮೃತಪಟ್ಟವರು. ನೇತ್ರಾವತಿ ಪುತ್ರಿ ಮೋಕ್ಷ (4)ಹಾಗೂ ಅವರ ಅಕ್ಕನ ಮಗ ಜ್ಞಾನೇಶ್ (6) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. .
ಆರೋಪಿ ಲಾರಿ ಚಾಲಕ ಹನೀಫ್ ವಿರುದ್ಧ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -