- Advertisement -
- Advertisement -
ಉಡುಪಿ: ಕುಂದಾಪುರದ ವ್ಯಕ್ತಿಯೋರ್ವರು ವಿಪರೀತ ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದವರು ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡಿನ ಸನ್ಯಾಸಿಬಲ್ಲೆಯ ನಿವಾಸಿ ದೇವದಾಸ್ ಖಾರ್ವಿ(50). ಇವರು ವಿಪರೀತ ಸಾಲಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಈ ಕಾರಣದಿಂದಲೇ ಜಿಗುಪ್ಪೆಗೊಂಡು ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ಕುರಿತು ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿದ್ದಾರೆ.
- Advertisement -