Friday, June 5, 2026
Homeಇತರಕಾರ್ಕಳ: ತೆಂಗಿನಮರದಿಂದ ಆಯತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಸಾವು...!

ಕಾರ್ಕಳ: ತೆಂಗಿನಮರದಿಂದ ಆಯತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಸಾವು…!

- Advertisement -
- Advertisement -

ತೆಂಗಿನಕಾಯಿ ಕೊಯ್ಯಲೆಂದು ಮರವೇರಿದ ವ್ಯಕ್ತಿ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ನಿತ್ಯಾನಂದ ಪುಭು(41) ಘಟನೆಯಲ್ಲಿ ಮೃತ ದುರ್ದೈವಿಯಾಗಿದ್ದಾರೆ.

ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಮನೆಯ ತೆಂಗಿನ ಮರಕ್ಕೇರಿದ್ದರು. ಈ ವೇಳೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದ ಅವರ ತಲೆಗೆ, ಕೈ, ಕಾಲಿಗೆ ಗಂಭೀರ ಗಾಯ ಉಂಟಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!