- Advertisement -
- Advertisement -
ಕುಂದಾಪುರ : ಹೇರಿಕುದ್ರು ಸೇತುವೆ ಮೇಲಿನಿಂದ ಪಂಚ ಗಂಗಾವಳಿ ಹೊಳೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಯುವಕನನ್ನು ಮೀನುಗಾರರ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ನಡೆದಿದೆ .
ಕುಂದಾಪುರದ ದಿಕ್ಕಿನಿಂದ ನಡೆದು ಬಂದ ಮಂಗಳೂರಿನ ಮಹೇಂದ್ರ ( 32 ) ಹೇರಿಕುದ್ರು ಸೇತುವೆ ಮೇಲೆ ಬಂದು ನೋಡ ನೋಡುತ್ತಲೇ ಏಕಾಏಕಿ ಸೇತುವೆಯಿಂದ ನದಿಗೆ ಹಾರಿದ್ದಾರೆ.
ಇದನ್ನು ಗಮನಿಸಿದ ದೂರದ ನದಿಯ ದಡದಲ್ಲಿದ್ದ ಯುವಕರು ಕೂಡಲೇ ದೋಣಿ ಮೂಲಕ ಸಾಗಿ ನೀರಿನಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದವನನ್ನು ಎತ್ತಿ ದಡಕ್ಕೆ ತಲುಪಿಸಿದ್ದಾರೆ . ಯುವಕನನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ
- Advertisement -