- Advertisement -
- Advertisement -
ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಲೆತ್ನಿಸಿದ ವ್ಯಕ್ತಿಯನ್ನು ನಗರ ಪೋಲಿಸ್ ಠಾಣೆ, ಅಗ್ನಿಶಾಮಕ ದಳ ಜಂಟಿ ಕಾರ್ಯಚರಣೆ ಮೂಲಕ ರಕ್ಷಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಶಂಕರ ಬಸಪ್ಪ ವಡ್ಡಾರ (48) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಪೆರಂಪಳ್ಳಿ ಬೊಬ್ಬರ್ಯಕಟ್ಟೆ ನಿವಾಸಿಯಾಗಿದ್ದಾರೆ.
ಬೆಳಗಿನ ಜಾವ ಈ ಘಟನೆ ನಡೆದಿದ್ದು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಸುದ್ದಿ ಮುಟ್ಡಿಸಲಾಯಿತು.ತಕ್ಷಣ ಕಾರ್ಯಾಚರಣೆ ನಡೆಸಿ ಶಂಕರ ಬಸಪ್ಪ ಅವರನ್ನು ರಕ್ಷಿಸಲಾಯಿತು. ಸಮಾಜಸೇವಕ ನಿತ್ಯಾನಂದ ಒಳಕಾಡು ಮತ್ತು ನಗರಸಭೆ ಸದಸ್ಯ ಗಿರೀಶ್ ಅಂಚನ್ ಕಾರ್ಯಾಚರಣೆ ಸಂದರ್ಭ ಸಹಕರಿಸಿದರು.
- Advertisement -