ಉಪ್ಪಿನಂಗಡಿ: ನಾಪತ್ತೆಯಾದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿ ಮೊಬೈಲ್ ಸಂಖ್ಯೆ ಹಿಮಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಳಿವು ಪೊಲೀಸರಿಗೆ ಸಿಕ್ಕಿದೆ.
ಜಿಲ್ಲಾ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ಭೇಟಿ ನೀಡುವುದಾಗಿ ಹೇಳಿ ತನ್ನ ಮನೆಯನ್ನು ತೊರೆದಿದ್ದ ಆ ವ್ಯಕ್ತಿ ಹಿಮಾಚಲ ಪ್ರದೇಶಕ್ಕೆ ಏಕೆ ಹೋಗಿರುವುದು ಅಥವಾ ಅವರ ಮೊಬೈಲ್ ಫೋನ್ ಬೇರೆಯವರು ಹೊತ್ತೊಯ್ದಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಅವರ ಪತ್ನಿಯ ಹೇಳಿಕೆಯ ಪ್ರಕಾರ, ಅವರು ಜುಲೈ 18 ರಿಂದ ಬೆಂಗಳೂರಿಗೆ ತೆರಳಿದ ನಂತರ ನಾಪತ್ತೆಯಾಗಿದ್ದರು. ಆ ಬಳಿಕ ಯಾವುದೇ ಮಾಹಿತಿ ಬಂದಿರಲಿಲ್ಲ. ಆತ ಅಲ್ಲಿಂದ ತಪ್ಪಿಸಿಕೊಳ್ಳಲೆಂದೇ ಹೋಗಿದ್ದಾನೋ ಅಥವಾ ಆತ ತಪ್ಪಿಸಿಕೊಳ್ಳುವುದರ ಹಿಂದೆ ಬೇರೆ ಕಾರಣಗಳಿವೆಯೋ ಗೊತ್ತಿಲ್ಲ ಈ ಬಗ್ಗೆ ತನಿಖೆಯಿಂದ ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
ಈ ದೂರಿಗೆ ಸಂಬಂಧಿಸಿ ಪೊಲೀಸ್ ತನಿಖೆ ಪ್ರಗತಿಯಲ್ಲಿರುವ ಸಂದರ್ಭ ನಾಪತ್ತೆಯಾದ ವ್ಯಕ್ತಿಯ ಚಹರೆ ದಿಲ್ಲಿಯಲ್ಲಿ ಬಂಧಿನತನಾದ ಭಯೋತ್ಪಾದಕನ ಚಹರೆಯನ್ನೇ ಹೊಂದಿದೆ ಎಂಬ ಸುದ್ದಿ ಹರಡಿ ಉಪ್ಪಿನಂಗಡಿ, ನೆಕ್ಕಿಲಾಡಿ ಪರಿಸರದ ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.