Tuesday, May 14, 2024
Homeಅಪರಾಧಮಂಗಳೂರು : ಪಾಡಾಂಗರ ಪೂಮಾಲೆ ಭಗವತಿ ಕ್ಷೇತ್ರದ ಪಂಚಲೋಹ ಮೊಗ ಕಳ್ಳತನ!

ಮಂಗಳೂರು : ಪಾಡಾಂಗರ ಪೂಮಾಲೆ ಭಗವತಿ ಕ್ಷೇತ್ರದ ಪಂಚಲೋಹ ಮೊಗ ಕಳ್ಳತನ!

spot_img
- Advertisement -
- Advertisement -

ಮಂಗಳೂರು : ಮಾಸ್ತಿಕಟ್ಟೆ ಕುಮೇರು ಪಾಡಾಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೇವಸ್ಥಾನದ ಸೊತ್ತು ಕಳವು ನಡೆದ ಘಟನೆ ರವಿವಾರ ತಡರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮಾಸ್ತಿಕಟ್ಟೆಯ ತೀಯ ಸಮಾಜ ಕುಟುಂಬಸ್ಥರ ಆರಾಧ್ಯ ಕುಮೇರು ಪಾಡಾಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಗುಡಿಯ ಬಾಗಿಲ ಬೀಗ ಒಡೆದು ಪಂಚಲೋಹದ ಮೊಗವನ್ನ ಕಳವು ಮಾಡಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ದೈವಸ್ಥಾನದ ಮುಖ್ಯ ಅರ್ಚಕರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅರ್ಚಕರು ಉಳ್ಳಾಲ ಪೊಲೀಸ್ ಠಾಣೆಗೆ ದೂರುನೀಡಿದ್ದಾರೆ. ಪೊಲೀಸರು ದೈವಸ್ಥಾನದ ಹತ್ತಿರದ ಜಾಗೃತ ವಿವಿಧೋದ್ದೇಶ ಸಂಘ ಇನ್ನಿತರ ಮಳಿಗೆಗಳ ಸಿಸಿ ಕ್ಯಾಮೆರಾ ತಪಾಸಣೆ ನಡೆಸುತ್ತಿದ್ದಾರೆ.

ಅಣ್ಣಪ್ಪ ದೈವದ ಗುಡಿಯ ಬೀಗ ಒಡೆದ ಕಳ್ಳರು ಒಳಗಿದ್ದ ಸುಮಾರು ಒಂದು ಲಕ್ಷ ಬೆಳೆ ಬಾಳುವ ಪಂಚ ಲೋಹದ ಮೊಗವನ್ನು ಮಾತ್ರ ಎಗರಿಸಿ ಅಲ್ಲಿದ್ದ ಪ್ರಭಾವಳಿ, ಬೆಳ್ಳಿ ಮತ್ತು ಲೋಹದ ಕಡಲೆ ಇತರ ದೈವೀ ಪರಿಕರಗಳನ್ನು ಹಾಗೇ ಬಿಟ್ಟು ಹೋಗಿದ್ದಾರೆ. ಕಳ್ಳರು ದೈವಸ್ಥಾನದ ಪ್ರಾಂಗಣದಲ್ಲಿರುವ ಪಾಡಂಗರ ಭಗವತಿ ಗುಡಿಯ ಬಾಗಿಲ ಬೀಗವನ್ನೂ ಮುರಿಯಲು ಪ್ರಯತ್ನಿಸಿ ವಿಫಲವಾಗಿದ್ದು ಕಂಡುಬಂದಿದೆ.

- Advertisement -
spot_img

Latest News

error: Content is protected !!