- Advertisement -
- Advertisement -
ಉಡುಪಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಫೆ.22 ಶನಿವಾರದಂದು ನಡೆದಿದೆ.
ಕಾರು ಅಪಘಾತದಲ್ಲಿ ಮೃತಪಟ್ಟವರು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55 ವ) ಎಂದು ತಿಳಿದುಬಂದಿದೆ.
ಘಟನೆಯ ವಿವರ: ರಮೇಶ್ ನಾಯಕ್ ಅವರು ಮಣಿಪಾಲದ ಜಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದು, ಅವರು ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ ರಸ್ತೆಯಲ್ಲಿರುವ ಅಂಗಡಿಗೆ ರಸ್ತೆ ದಾಟುತ್ತಿದ್ದಾಗ ಶಿವಮೊಗ್ಗದ ಕಡೆಗೆ ಹೋಗುವ ಕಾರು ಡಿಕ್ಕಿ ಹೊಡೆದಿದೆ. ಅತಿ ವೇಗದಲ್ಲಿದ್ದ ಕಾರು ಗುದ್ದಿದ ರಭಸಕ್ಕೆ ರಮೇಶ್ ನಾಯಕ್ ಅವರನ್ನು ಸುಮಾರು ದೂರ ಕಾರು ಎಳೆದುಕೊಂಡು ಹೋಗಿದೆ.
ಇತ್ತೀಚೆಗೆ ಈ ಸ್ಥಳದಲ್ಲಿ ಹಲವು ಅಪಘಾತ ಪ್ರಕರಣಗಳು ನಡೆದಿದ್ದು, ಸೂಕ್ತ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
- Advertisement -