- Advertisement -
- Advertisement -
ಪುತ್ತೂರು: ಗುಂಡ್ಯ ಹೊಳೆಯಲ್ಲಿ ಬಂಡೆಕಲ್ಲಿನ ಮೇಲೆ ನಿಂತು ಸೆಲ್ಫಿ ತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ನದಿ ನೀರಿಗೆ ಬಿದ್ದು ಕಣ್ಮರೆಯಾದ ಯುವಕನ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ.
ಬುಧವಾರ ಸ್ಥಳೀಯರು ಸ್ಥಳಕ್ಕಾಗಮಿಸಿ ನದಿ ನೀರಿನಲ್ಲಿ ಯುವಕನಿಗಾಗಿ ರಾತ್ರಿವರೆಗು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಅಗ್ನಿಶಾಮಕದಳ, ಮುಳುಗು ತಜ್ಞರನ್ನು ಕರೆಸಿ ಶೋಧ ನಡೆಸಲು ನಿರ್ಧಾರಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಸಬ್ ಇನ್ಸೆಕ್ಟರ್ ಕುಮಾರ್ ಕಾಂಬ್ಳೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -