- Advertisement -
- Advertisement -
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಪುಂಡಾಟ ಮುಂದುವರಿದಿದ್ದು ಸೈನ್ಯ ಉಗ್ರರನ್ನು ಮಟ್ಟಹಾಕುವ ಕಾರ್ಯದಲ್ಲಿ ನಿರತವಾಗಿದೆ.ಇಂದು ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.ಇವರು ಯಾವ ಸಂಘಟನೆಗೆ ಸೇರಿದ್ದರು ಎಂಬುದು ತನಿಖೆಯಿಂದ ತಿಳಿಯಬೇಕಿದೆ.
ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಾಗ ಭದ್ರತಾ ಪಡೆಗಳು ಈರ್ವರನ್ನ ಹತ್ಯೆ ಮಾಡಿದ್ದಾರೆ.
- Advertisement -