ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡದ ಹಿರಿಯ ನಟ ಶಿವರಾಂ ಅವರು ಇಂದು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ.
ಐದು ದಿನಗಳ ಹಿಂದೆ ಕಾರು ಅಪಘಾತದಲ್ಲಿ ತ್ರೀವವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದ ಸಂದರ್ಭದಲ್ಲಿ ಜಾರಿ ಬಿದಿದ್ದಾರೆ. ಕೂಡಲೇ ಅವರನ್ನು, ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ ವೇಳೆಯಲ್ಲಿ, ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದದನ್ನು ವೈದ್ಯರು ಕಂಡು ಹಿಡಿದಿದ್ದಾರೆ. ಇನ್ನೂ ಅವರಿಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಸಾಧ್ಯವಾಗಲಿಲ್ಲ, ಬದಲಿಗೆ ಅವರಿಗೆ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಕೊನೆ ಉಸಿರು ಎಳೆದಿದ್ದಾರೆ.
ಎಸ್. ಶಿವರಾಮ್ (ಜನನ 1938) ಕನ್ನಡದ ಹಿರಿಯ ಚಿತ್ರನಟನಟರಾಗಿದ್ದು. ಇವರು ನೂರಾರು ಕನ್ನಡ ಚಿತ್ರಗಳಲ್ಲಿ ಸುಮಾರು ಆರು ದಶಕಗಳ ಕಾಲ ಪೋಷಕನಟನಾಗಿ ಕಾಣಿಸಿಕೊಂಡಿದ್ದರು. ನಿರ್ದೇಶಕನಾಗಿ, ನಿರ್ಮಾಪಕನಾಗು ಕೂಡಾ ಚಿತ್ರರಂಗಕ್ಕೆ ತನ್ನ ಕೊಡುಗೆ ನೀಡಿದ್ದಾರೆ. ತನ್ನ ಸಹೋದರ ಎಸ್.ರಾಮನಾಥನ್ರವರೊಂದಿಗೆ ಸೇರಿ ರಾಶಿ ಬ್ರದರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಹಲವಾರು ಚಿತ್ರಗಳನ್ನು ನಿರ್ಮಿಸಿದರು.ಇದರಲ್ಲಿ ಬಾಲಿವುಡ್ ಚಿತ್ರ ಕೂಡಾ ಸೇರಿದೆ. ಕಲ್ಯಾಣ್ ಕುಮಾರ್ ನಟಿಸಿದ ಕು. ರಾ. ಸೀತಾರಾಮಶಾಸ್ತ್ರಿ ಅವರ ಬೆರೆತ ಜೀವ ಚಿತ್ರದಲ್ಲಿ ಪೋಷಕ ಪಾತ್ರದ ಮೂಲಕ ನಟನೆಗೆ ಪಾರ್ದಾರ್ಪಣೆ ಮಾಡಿದರು. ಚರಿತ್ರ ನಟರಾಗಿ ಅವರ ಅವಿಸ್ಮರಣೀಯ ಅಭಿನಯ ದ ಚಿತ್ರಗಳಲ್ಲಿ ಶರಪಂಜರ , ನಾಗರಹಾವು , ಶುಭಮಂಗಳ ಸೇರಿವೆ. ; ಇವೆಲ್ಲವೂ ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ ಚಿತ್ರಗಳಾಗಿದೆ.