- Advertisement -
- Advertisement -
ಬ್ರಹ್ಮಾವರ: ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ನಡೆದಿದೆ.
ಸಯ್ಯದ್ ಬ್ಯಾರಿ ಎಂಬುವರ ಮಗಳು ಮಿಪ್ರಿಯಾ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಕುಂದಾಪುರ ಬ್ಯಾರೀಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದಳು. ಇದ್ದಕ್ಕಿದ್ದ ಹಾಗೇ ತಲೆನೋವು ಎಂದು ಕೋಣೆಗೆ ಹೋದವಳು ಕೊನೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -