- Advertisement -
- Advertisement -
ಹೆಜಮಾಡಿ: ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಗುಡ್ಡೆಯಂಗಡಿಯಲ್ಲಿ ನಡೆದಿದೆ.
ಜಯಂತಿ ಗಡಿಯಾರ್( 54) ಮೃತ ಶಿಕ್ಷಕಿ. ಕಳೆದ 30 ವರ್ಷಗಳಿಂದ ಮುಲ್ಕಿ ಸಮೀಪದ ಎಸ್ ಕೋಡಿ ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿಕ್ಷಕಿಯ ನಿಧನಕ್ಕೆ ಶಾಲಾ ಆಡಳಿತ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
- Advertisement -