Monday, May 20, 2024
Homeಚಿಕ್ಕಮಗಳೂರುಆಗುಂಬೆ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

spot_img
- Advertisement -
- Advertisement -

ತೀರ್ಥಹಳ್ಳಿ : ಆಗುಂಬೆಯ ಬಳಿಯ ಹೋಟೆಲ್ ಮಂದಾರ್ತಿ ಗ್ರಾಂಡ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆಯ ವಿವರ: ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಎಂಬಾತ ಕ್ಯಾಂಟರ್ ಒಳಗೆ ಮಲಗಿದ್ದರು. ಈ ವೇಳೆ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಲ್ಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಡ್ರೈವರ್ ಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ದುರ್ಘಟನೆಯು ಆಗುಂಬೆಯಿಂದ ತೀರ್ಥಹಳ್ಳಿಗೆ ಕ್ಯಾಂಟರ್ ಬರುವ ವೇಳೆ ನಡೆದಿದೆ. ಕ್ಯಾಂಟರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಲ್ಮಾನ್ ಮೃತದೇಹ ತೀರ್ಥಹಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ತೀರ್ಥಹಳ್ಳಿ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

- Advertisement -
spot_img

Latest News

error: Content is protected !!