- Advertisement -


- Advertisement -
ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಗುಡ್ಡೆ ತೋಟ ನಿವಾಸಿ ಪ್ರೇಮ (55)ಅವರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ.21ರಂದು ನಡೆದಿದೆ.
ಅವರು ಮದ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ನಿರತವಾಗಿದ್ದಾಗ ನಾಗರ ಹಾವು ಕಡಿದಿದೆ ಎಂದು ಹೇಳಲಾಗಿದೆ.
ಹಾವು ಕಡಿದ ಕೂಡಲೇ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದಿಗೆ ಪ್ರೇಮ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವಿಷದ ತೀವ್ರ ಪರಿಣಾಮದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ.
- Advertisement -


