- Advertisement -
- Advertisement -
ಉಳ್ಳಾಲ: ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪಾದಚಾರಿ ಮಹಿಳೆ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರಿನ ಉಳ್ಳಾಲದ ನರಿಂಗಾನ ಪ್ರದೇಶದಲ್ಲಿ ನಡೆದಿದೆ.
ಮಂಗಳೂರು ಮುಡಿಪು ಕಡೆಗೆ ಬಸ್ ಸಂಚರಿಸುತ್ತಿದ್ದ ವೇಳೆ ಬಸ್ ಬರುವುದನ್ನು ಗಮನಿಸದ ಮಹಿಳೆ ರಸ್ತೆ ದಾಟುತ್ತಿದ್ರು. ಈ ವೇಳೆ ಚಾಲಕ ಅಪಘಾತ ತಪ್ಪಿಸಲು ದಿಢೀರ್ ಅಂತ ಬಸ್ನ ಎಡಕ್ಕೆ ತಿರುಗಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದಾರೆ. ಬಸ್ ಡ್ರೈವರ್ ಗೋಪಾಲಕೃಷ್ಣ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಘಟನೆಯ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದ್ದು ಭಾರೀ ವೈರಲ್ ಆಗಿದೆ.
- Advertisement -