- Advertisement -
- Advertisement -
ಮಣಿಪಾಲ : ಹಳೆ ದ್ವೇಷದ ಕಾರಣ ಯುವಕನೊಬ್ಬ ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿ ಅವರ ಪತಿಗೆ ಕಬ್ಬಿಣದ ರಾಡ್ ನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಅಲೆವೂರು ಸಮೀಪದ ಮಂಚಿಯಲ್ಲಿ ನಡೆದಿದೆ.
ಕೃಷ್ಣ ನಾಯ್ಕ್ (54) ಹಲ್ಲೆಗೆ ಒಳಗಾದವರು. ಗಂಭೀರ ಗಾಯಗೊಂಡ ಕೃಷ್ಣ ನಾಯ್ಕ್ ರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -