Sunday, May 5, 2024
Homeತಾಜಾ ಸುದ್ದಿಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ; ಚಿಕಿತ್ಸೆ ಫಲಿಸದೇ ಸಾವು

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ; ಚಿಕಿತ್ಸೆ ಫಲಿಸದೇ ಸಾವು

spot_img
- Advertisement -
- Advertisement -

ಸುಳ್ಯ: ಪಂಜದ ಹರಿಹರ ಪಲ್ಲತ್ತಡ್ಕ ಸಮೀಪ ಮಲ್ಲಾರ ಎಂಬಲ್ಲಿ ಯುವಕನೋರ್ವ ಬೈಕ್‌ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಮೃತಪಟ್ಟ ವ್ಯಕ್ತಿ ಪಂಜ ಸಮೀಪದ ಕೂತ್ಕುಂಜ ಗ್ರಾಮದ ಕಲ್ಕ ಗೋಪಾಲ ಮತ್ತು ಶ್ರೀಮತಿ ದೇವಕಿ ದಂಪತಿ ಪುತ್ರ ಚಿದಾನಂದ (37).

ಘಟನೆಯ ವಿವರ: ಚಿದಾನಂದ ಅವರು ರಾತ್ರಿ ಹರಿಹರದ ಕಡೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದು, ಅವರು ಮನೆಗೆ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಹರಿಹರ ಸಮೀಪ ಮಲ್ಲಾರ ಎಂಬಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದೆ. ಆ ಸಂದರ್ಭದಲ್ಲಿ ಅದೇ ಮಾರ್ಗವಾಗಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತವನ್ನು ಗಮನಿಸಿ ಆ್ಯಂಬುಲೆನ್ಸ್ ನಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಅವರ ಮನೆಯವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ರಾತ್ರಿ ಮನೆಯವರು ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಚಿದಾನಂದ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತಂತೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!