Friday, May 3, 2024
Homeಕೊಡಗುಚಾರಣಕ್ಕೆ ತೆರಳಿದ್ದ ಯುವಕ ಹೃದಯಾಘಾತದಿಂದ ನಿಧನ

ಚಾರಣಕ್ಕೆ ತೆರಳಿದ್ದ ಯುವಕ ಹೃದಯಾಘಾತದಿಂದ ನಿಧನ

spot_img
- Advertisement -
- Advertisement -

ಬೆಂಗಳೂರಿನ ಖಾಸಗಿ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕನೋರ್ವ ಚಾರಣಕ್ಕೆ ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಜತಿನ್ ಕುಮಾರ್ (25). ಹರಿಯಾಣ ಮೂಲದ ನಿವಾಸಿಯಾಗಿದ್ದ ಈತ ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ ವೀಕ್ಷಣೆ ಬಂದಿದ್ದಂತಹ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜತಿನ್ ಕುಮಾರ್, ಸ್ನೇಹಿತರೊಂದಿಗೆ ಮಡಿಕೇರಿಯ ಚಾರಣಕ್ಕೆ ಆಗಮಿಸಿದ್ದನು. ಭಾನುವಾರದಂದು ಬೆಟ್ಟದ ಮೇಲೆ ತಲುಪಿದಾಗ ಈತನಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೆಲಹೊತ್ತಿನಲ್ಲೇ ಎದೆ ನೋವು ಜಾಸ್ತಿ ಆಗಿ ಜತಿನ್ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಯುವಕ ಪ್ರಾಣಬಿಟ್ಟ ವಿಚಾರವನ್ನು ಸ್ನೇಹಿತರು ಕೂಡಲೇ ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ತಿಳಿಸಿದ್ದು, ಅವರು ಸ್ಥಳಕ್ಕೆ ದೌಡಾಯಿಸಿದರು ಎನ್ನಲಾಗಿದೆ. ನಂತರ ಬೆಟ್ಟದ ತುದಿಯಿಂದ ಕಚ್ಚಾರಸ್ತೆಯಲ್ಲಿ ಹರಸಾಹಸಪಟ್ಟು ಮೃತದೇಹವನ್ನು ಪೊಲೀಸರು ತಂದಿದ್ದಾರೆ. ಈ ಘಟನೆಯ ಬಗ್ಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!