- Advertisement -
- Advertisement -
ಕಾಸರಗೋಡು; ಇತ್ತೀಚೆಗಷ್ಟೇ ವಿದೇಶದಿಂದ ಬಂದಿದ್ದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕಾಸರಗೋಡಿನ ಕಳ್ನಾಡ್ನಲ್ಲಿ ನಡೆದಿದೆ. ಯಾಸಿರ್ (25) ಮೃತ್ಯು ದುರ್ದೈವಿ.
ಯಾಸಿರ್ ಕಳ್ನಾಡ್ ಬಳಿಯ ಕೆರೆಯಲ್ಲಿ ಸ್ನೇಹಿತರ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ.ಯಾಸಿರ್ ಗೆ ಸ್ನೇಹಿತರು ಕೂಡಲೇ ರಕ್ಷಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ.ಬಳಿಕ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಈ ಕುರಿತು ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -