- Advertisement -
- Advertisement -
ಪುತ್ತೂರು: ಸೆ.29 ರಂದು ಸಾಲ್ಮರದಲ್ಲಿ ರಸ್ತೆ ಬದಿಯಲ್ಲಿ ಅಪಘಾತಗೊಂಡ ಸ್ಥಿತಿಯಲ್ಲಿ ಬೈಕ್ ಸವಾರ ಬಿದ್ದಿದ್ದು ಆತನನ್ನ ಗಸ್ತು ತಿರುಗುತ್ತಿದ್ದ ಪೊಲೀಸರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಬೈಕ್ ಸವಾರ ಇಂದು ಸಾವನ್ನಪ್ಪಿದ್ದಾನೆ.
ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ ನಿತಿನ್ ಮೃತಪಟ್ಟ ಯುವಕ. ಸಾಲ್ಮರ ಸಮೀಪ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಈತನನ್ನು ಪುತ್ತೂರು ಆಸ್ಪತ್ರೆಯಿಂದ ನಂತರ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
- Advertisement -