ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ವೇಳೆ ಅಬಕಾರಿ ದಳ ಗಸ್ತು ತಿರುಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿಯ ಎರಡು ಕಡೆ ಅಕ್ರಮ ಮದ್ಯ ಮಾರಾಟ ದಾಸ್ತಾನು ಸ್ಥಳಕ್ಕೆ ದಾಳಿ ಮಾಡಿ ಅಕ್ರಮ ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣ-1: ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ನಿನ್ನಿಕಲ್ಲು ನಿವಾಸಿ ಕೃಷ್ಣಪ್ಪ ಪೂಜಾರಿ ಮಗ ವಿಶ್ವನಾಥ್ ಎಂಬತ ತಮ್ಮ ಅಡಕೆ ತೋಟದಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ 8.280 ಲೀಟರ್ ಮದ್ಯ ದಾಸ್ತಾನು ಮಾಡುತ್ತಿದ್ದ ಸ್ಥಳಕ್ಕೆ ಅಬಕಾರಿ ದಳ ಮಾ.29 ರಂದು ದಾಳಿ ಮಾಡಿ ವಶಪಡಿಸಿಕೊಂಡಿದ್ದು. ಆರೋಪಿ ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದು.ಅಕ್ರಮ ಮದ್ಯದ ಇದರ ಒಟ್ಟು ಮೌಲ್ಯ 3,240 ರೂಪಾಯಿ ಅಗಿದೆ. ಈ ಬಗ್ಗೆ ಆರೋಪಿ ವಿಶ್ವನಾಥ್ ವಿರುದ್ದ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ -2; ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ ವಾಮನ ಗೌಡರ ಮಗ ಕೋಟಿಯ್ಯಪ್ಪ ಗೌಡ ಎಂಬಾತನ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುವ ಉದ್ದೇಶದಿಂದ ತಯಾರಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಅಬಕಾರಿ ದಳಕ್ಕೆ ಖಚಿತ ಮಾಹಿತಿ ಬಂದಿದ್ದು. ಈ ಮಾಹಿತಿ ಮೇರೆಗೆ ಬೆಳ್ತಂಗಡಿ ಅಬಕಾರಿ ನಿರೀಕ್ಷರಾದ ನವೀನ್ ಕುಮಾರ್ ನೇತೃತ್ವದಲ್ಲಿ ಮಾ.31 ರಂದು ದಾಳಿ ಮಾಡಿದ್ದು ಈ ವೇಳೆ ಆರೋಪಿ ಪರಾರಿಯಾಗಿದ್ದಾನೆ.ದಾಳಿ ವೇಳೆ ಐದು ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 5,200 ರೂಪಾಯಿ ಅಗಿದೆ. ಈ ಬಗ್ಗೆ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪರಾರಿಯಾದ ಆರೋಪಿ ಕೋಟಿಯ್ಯಪ್ಪ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಅಬಕಾರಿ ಇನ್ಸ್ಪೆಕ್ಟರ್ ನವೀನ್ ಕುಮಾರ್ ಸಬ್ ಇನ್ಸ್ಪೆಕ್ಟರ್ ಸಯ್ಯದ್ ಶಬೀರ್ ಮತ್ತು ಸಿಬ್ಬಂದಿ ಭೋಜ.ಕೆ, ವಿನೋಯ್.ಸಿ.ಜೆ, ವಾಹನ ಚಾಲಕ ನವೀನ್ ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.