ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯವಾಗಿದ್ದು, ಪ್ಲೇಆಫ್ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾದ ಖುಷಿಯಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಇದೀಗ ಎಬಿ ಡಿ ವಿಲಿಯರ್ಸ್ ನೀಡಿರುವ ಹೇಳಿಕೆ ಮತ್ತಷ್ಟು ಖುಷಿಯನ್ನು ನೀಡಿದೆ. ಹೌದು, ಇತ್ತೀಚೆಗಷ್ಟೆ ವಿರಾಟ್ ಕೊಹ್ಲಿ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಬಿ ಡಿ ವಿಲಿಯರ್ಸ್ ತಂಡಕ್ಕೆ ಮರಳಿದ್ದಾರೆ ಎಂಬ ಮಾತನ್ನು ಹೇಳಿದ್ದರು.
ಇದೀಗ ಸ್ವತಃ ಎಬಿ ಡಿ ವಿಲಿಯರ್ಸ್ ಈ ಕುರಿತಾಗಿ ಹೇಳಿಕೆಯನ್ನು ನೀಡಿದ್ದು, ತಾವು ಯಾವ ಪಾತ್ರ ನಿರ್ವಹಿಸಬಹುದು ಎಂಬುದರ ಕುರಿತು ಸುಳಿವನ್ನು ನೀಡಿದ್ದಾರೆ. ಎಬಿ ಡಿ ವಿಲಿಯರ್ಸ್ ಅವರ ಈ ಮಾತುಗಳನ್ನು ಕೇಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಖುಷಿಯ ಜೊತೆ ಕುತೂಹಲಕ್ಕೂ ಕೂಡ ಒಳಗಾಗಿದ್ದಾರೆ. ಎಬಿ ಡಿ ವಿಲಿಯರ್ಸ್ ತನ್ನ ಮರಳಿಕೆಯನ್ನು ವಿರಾಟ್ ಕೊಹ್ಲಿ ಖಚಿತಪಡಿಸಿದ್ದು ಖುಷಿ ತಂದಿದೆ ಎಂದಿದ್ದಾರೆ. ಹಾಗೂ ಮುಂದಿನ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಇರಲಿದ್ದೇನೆ ಎಂಬುದನ್ನು ಎಬಿ ಡಿ ವಿಲಿಯರ್ಸ್ ಖಚಿತಪಡಿಸಿದ್ದಾರೆ.
ಇನ್ನು ಎಬಿ ಡಿ ವಿಲಿಯರ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುವುಕ್ಕೂ ಮುನ್ನವೇ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿಯನ್ನು ಘೋಷಿಸಿದ್ದರು. ಹಾಗೂ ವಿರಾಟ್ ಕೊಹ್ಲಿ ಎಬಿಡಿ ಮತ್ತೆ ಮರಳಿದ್ದಾರೆ ಎಂಬುದನ್ನು ಬಹಿರಂಗಪಡಿಸಿದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಎಬಿಡಿ ಕೋಚ್ ಆಗಿ ಅಥವಾ ಮೆಂಟರ್ ಆಗಿ ತಂಡ ಸೇರಬಹುದು ಎಂಬುದನ್ನು ಊಹಿಸಿದ್ದರು. ಆದರೆ, ಎಬಿಡಿ ಎಲ್ಲಿಯೂ ಸಹ ಕೋಚ್ ಅಥವಾ ಮೆಂಟರ್ ಎಂದು ಹೇಳದಯೇ ತಂಡಕ್ಕೆ ಮರಳಿದ್ದೇನೆ ಎಂದಿದ್ದಾರೆ. ಹಾಗೂ ನಾವು ಇನ್ನೂ ಯಾವುದನ್ನೂ ನಿಶ್ಚಯಿಸಿಲ್ಲ ಎಂದಿರುವ ಎಬಿಡಿ ಮುಂದಿನ ವರ್ಷ ಮರಳಲಿದ್ದೇನೆ ಆದರೆ ಯಾವ ಪಾತ್ರದಲ್ಲಿ ಎಂಬುದು ತಿಳಿದಿಲ್ಲ ಎಂದಿದ್ದಾರೆ. ಈ ಮೂಲಕ ಎಬಿಡಿ ತಾನು ಆಟಗಾರನಾಗಿ ಬೇಕಾದರೂ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂಬ ಸುಳಿವನ್ನು ನೀಡಿದಂತಿದೆ.
ಮುಂದಿನ ಐಪಿಎಲ್ನಲ್ಲಿ ಆರ್ಸಿಬಿ ತಂಡಕ್ಕೆ ಎಬಿಡಿ ರಿ-ಎಂಟ್ರಿ
- Advertisement -
- Advertisement -
- Advertisement -