Wednesday, June 3, 2026
Homeಕರಾವಳಿವಿಷ ಸೇವಿಸಿ ಅಸ್ವಸ್ಥರಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ ನಿಧನ

ವಿಷ ಸೇವಿಸಿ ಅಸ್ವಸ್ಥರಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ ನಿಧನ

- Advertisement -
- Advertisement -

ಬೆಳ್ತಂಗಡಿ; ಸಾಲ ಬಾಧೆಗೆ ಒಳಗಾಗಿ ವಿಷ ಸೇವಿಸಿ ಅಸ್ವಸ್ಥರಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ನಿಧನರಾಗಿದ್ದಾರೆ. ಅವರು ನ.5 ರಂದು ವಿಷ ಸೇವಿಸಿದ್ದವರು. ಇಂದು (ನ.16) ಮಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನ.5 ರಂದು ಸಂಜೆಯವರೆಗೆ ಮನೆಯಲ್ಲಿಯೇ ಇದ್ದ ಅವರು ಇಳಿ ಸಂಜೆ‌ ಮನೆಯ ಪಕ್ಕದ ನೇತ್ರಾವತಿ ನದಿ ಕಿನಾರೆಯ ಅಲಂಜಿಕಟ್ಟ ಎಂಬಲ್ಲಿಗೆ ತೆರಳಿ ವಿಷ  ಸೇವಿಸಿ ತೀವ್ರ ಅಸ್ವಸ್ಥರಾಗಿ ಬಿದ್ದಿದ್ದರು.

ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹಮೀದ್‌ ಅವರು ಕಿಲ್ಲೂರು ಮಸ್ಜಿದ್‌ನ ಅಧ್ಯಕ್ಷರಾಗಿ ಮಸೀದಿಯ ಸಮಗ್ರ ಅಭಿವೃದ್ಧಿ, ನೂತನ ಮದರಸ ಕಟ್ಟಡ‌ ನಿರ್ಮಾಣದಲ್ಲಿ ಪ್ರಮುಖ‌ ಪಾತ್ರ ವಹಿಸಿದ್ದರು.

ಮೃತರು ಪತ್ನಿ ಲುಬಾನಾ, ಏಕೈಕ ಪುತ್ರ ಶಾಕಿರ್ ಮತ್ತು ಸಹೋದರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

- Advertisement -

Latest News

error: Content is protected !!