Tuesday, May 7, 2024
Homeಕರಾವಳಿಗೋಡೆ ಬರಹ ಪ್ರಕರಣ: ಆರೋಪಿಗಳ ಪತ್ತೆಗೆ ಎಬಿವಿಪಿ ಸುಳ್ಯ ವತಿಯಿಂದ ಆಗ್ರಹ

ಗೋಡೆ ಬರಹ ಪ್ರಕರಣ: ಆರೋಪಿಗಳ ಪತ್ತೆಗೆ ಎಬಿವಿಪಿ ಸುಳ್ಯ ವತಿಯಿಂದ ಆಗ್ರಹ

spot_img
- Advertisement -
- Advertisement -

ಸುಳ್ಯ: ಮಂಗಳೂರಿನಲ್ಲಿ ಉಗ್ರ ಸಂಘಟನೆಗೆ ಜೈಕಾರ ಹಾಕುವ ಗೋಡೆ ಬರಹವನ್ನು ಖಂಡಿಸಿ ಬರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಎ.ಬಿ.ವಿ.ಪಿ ಸುಳ್ಯ ನಗರ ವತಿಯಿಂದ ತಹಶಿಲ್ದಾರ್ ಮುಖಾಂತರ ಮಾನ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

2008 ನವೆಂಬರ್ 26 ದೇಶ ಕಂಡ ಕರಾಳ ದಿನ .ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೋಲಿಸರು, ಸೇರಿ ಹಲವಾರು ನಾಗರಿಕರು ಮೃತಪಟ್ಟ ದಿನ.ಇಡೀ ದೇಶವೇ ಶ್ರದ್ಧಾಂಜಲಿ ಸಲ್ಲಿಸಬೇಕಾದ ಈ ದಿನ ಕೆಲ ದೇಶದ್ರೋಹಿಗಳು ಈ ರೀತಿಯ ಗೋಡೆ ಬರಹಗಳನ್ನು ಬರೆದು ಮಂಗಳೂರಿನ ಶಾಂತಿಯನ್ನು ಕೆಡಿಸುವ ಮೂಲಕ ವಿಕೃತಿ ಮೆರೆದಿದ್ದಾರೆ .ಈ ಕೂಡಲೇ ಈ ಘಟನೆಯ ಹಿಂದಿರುವ ದೇಶ ದ್ರೋಹಿಗಳನ್ನು ಬಂಧಿಸದಿದ್ದರೆ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ಈ ಘಟನೆಯ ಹಿಂದಿರುವ ದೇಶದ್ರೋಹಿಗಳನ್ನು ಬಂಧಿಸಿ ಅವರ ವಿರುದ್ದ ಕಠಿಣ ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಎ.ಬಿ.ವಿ.ಪಿ ಸುಳ್ಯ ನಗರ ಕಾರ್ಯದರ್ಶಿ ರುಚಿರ್ ರೈ, ಸಹ ಕಾರ್ಯದರ್ಶಿ ರವೀಶ ಕೇವಳ ಕಾರ್ಯಕರ್ತರಾದ ಮೇಘರಾಜ್ ,ಕೀರ್ತನ್ ರವರು ಉಪಸ್ಥಿತಿ ಇದ್ದರು.

- Advertisement -
spot_img

Latest News

error: Content is protected !!