Sunday, June 7, 2026
Homeತಾಜಾ ಸುದ್ದಿಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ಅಧಿಕಾರಿಗಳಿಗೆ ನಿಂದನೆ: ಸರ್ಕಾರಿ ವಾಹನ ಜಖಂ

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ಅಧಿಕಾರಿಗಳಿಗೆ ನಿಂದನೆ: ಸರ್ಕಾರಿ ವಾಹನ ಜಖಂ

- Advertisement -
- Advertisement -

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ, ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವ್ಯಾಚ್ಚ ಶಬ್ದಗಳಿಂದ ಬೈದಿರುವ ಘಟನೆ ಶನಿವಾರ ಬೆಳಿಗ್ಗೆ ತುಂಬೆ ಎಂಬಲ್ಲಿ ನಡೆದಿದೆ.

ಮಂಗಳೂರು ಜಿ.ಪಂ.ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಎಂಬವರು ಜಿ.ಪಂ.ಇಲಾಖೆಯ ಅಧಿಕಾರಿಗಳನ್ನು ಮಂಗಳೂರಿನಿಂದ ಪುತ್ತೂರಿಗೆ ಮುಖ್ಯವಾದ ಸಭೆಗೆ ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಲ್ಲಿ ಹೋಗುತ್ತಿದ್ದ ವಾಹನ ಸವಾರನೋರ್ವ ಬ್ರೇಕ್ ಹಾಕಿದ್ದಾರೆ ಎಂಬ ಕಾರಣಕ್ಕೆ ಜಿ.ಪಂ.ಇಲಾಖೆಯ ವಾಹನ ಚಾಲಕ ಜಗದೀಶ್ ಅವರು ಕೂಡ ಬ್ರೇಕ್ ಹಾಕಿದ್ದಾರೆ.

ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಯುವಕ, ಕಾರಿನ ಹಿಂಬದಿಯಲ್ಲಿದ್ದು ಆತ ಕೂಡ ಬ್ರೇಕ್ ಹಾಕಿದಾಗ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಆತ ಕಾರಿಗೆ ದ್ವಿಚಕ್ರವಾಹನವನ್ನು ಅಡ್ಡ ಇಟ್ಟು, ತಡೆಒಡ್ಡಿ ಬಳಿಕ ಕಾರಿನ ಮಿರರ್ ಅನ್ನು ಪುಡಿಮಾಡಿ, ಚಾಲಕ ಸಹಿತ ಕಾರಿನಲ್ಲಿದ್ದ ಅಧಿಕಾರಿಗಳಿಗೆ ಅವ್ಯಾಚ್ಯ ಶಬ್ದಗಳಿಂದ ಬೈದಿರುವ ಘಟನೆ ನಡೆದಿದೆ.

- Advertisement -

Latest News

error: Content is protected !!