- Advertisement -
- Advertisement -
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳು ತಾವು ಅನುಭವಿಸುತ್ತಿರುವ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕುಂದಾಪುರ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಪರೀಕ್ಷೆ ಮುಗಿದು 1 ವರ್ಷ ಹತ್ತಿರವಾದರೂ ಇನ್ನೂ ಕೂಡ ಮೌಲ್ಯಮಾಪನವಾಗಿಲ್ಲ. ಅಂಕಪಟ್ಟಿ ಇಲ್ಲದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಅಂಕಪಟ್ಟಿ ಇಲ್ಲದೆ ಉದ್ಯೋಗವಕಾಶಗಳಿಗೆ ಸೇರಲು ಆಗುತ್ತಿಲ್ಲ. ಹೀಗೆ ಮಂಗಳೂರು ವಿ.ವಿಯ ಈ ಎಲ್ಲ ಬೇಜಾವಾಬ್ದಾರಿತನದಿಂದಾಗಿ ಮಕ್ಕಳು ಹಾಗೂ ಪೋಷಕರು ಸಮಸೆಯ ಎದುರಿಸುತ್ತಿದ್ದಾರೆ ಎಂದು ಎಬಿವಿಪಿ ಮುಖಂಡರು ಆಕ್ರೋಶ ಹೊರ ಹಾಕಿದ್ರು.
- Advertisement -