- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ರದ್ದುಗೊಂಡಿದೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಎಸಿಬಿ ರದ್ದುಪಡಿಸಿ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ತಿಂಗಳು ಎಸಿಬಿ ರಚನೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಇಂದು ಅಧಿಕೃತವಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಿದೆ.
ಈ ಮೂಲಕ ಲೋಕಾಯುಕ್ತವನ್ನು ಬಲಪಡಿಸುವ ಪ್ರಕ್ರಿಯೆನ್ನು ರಾಜ್ಯ ಸರ್ಕಾರ ಆರಂಭಿಸಿದಂತಾಗಿದೆ. 2018 ರ ವಿಧಾನಸಭೆ ಚುನಾವಣೆಯಲ್ಲಿ ಎಸಿಬಿ ರದ್ದುಗೊಳಿಸುವಿಕೆಯನ್ನು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.
- Advertisement -