- Advertisement -
- Advertisement -
ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಸಂಜೆ ಕೊಯ್ಯೂರು ಕ್ರಾಸ್ ಬಳಿ ನಡೆದಿದೆ. ವಿಜಯ್ ( 25) ಮೃತ ಬೈಕ್ ಸವಾರ.
ವಿಜಯ್ ಉಜಿರೆಯಿಂದ ಕೆಲಸ ಮುಗಿಸಿಕೊಂಡು ಸಂಜೆ ಬಂಟ್ವಾಳ ಮನೆಗೆ ತೆರಳುತ್ತಿದ್ದ ವೇಳೆ ಕೊಯ್ಯೂರು ಕ್ರಾಸ್ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟು ವಿಜಯ್ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೋರ್ವ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮೃತ ಯುವಕ ವಗ್ಗ ಸಮೀಪದವರೆಂದು ತಿಳಿದು ಬಂದಿದೆ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -